ಗಂಗಾವತಿ ತಾಲೂಕಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಹೇಶ ಟಿ ನಾಯಕ ಸಾರಥ್ಯದಲ್ಲಿ ಟಿ ಪಬ್ಲಿಕ್ ನ್ಯೂಸ್ ಚಾನೆಲ್ ಹಾಗೂ ವೆಬ್ಸೈಟ್ ಉದ್ಘಾಟಿಸಲಾಯಿತು
ಉದ್ಘಾಟಕರಾದ ತಾಲೂಕು ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷರಾದ ವೀರಭದ್ರಪ್ಪ ನಾಯಕ
ದೀಪ ಹಚ್ಚುವ ಮುಖಾಂತರ ಚಾಲನೆ ನೀಡಿ ನಂತರ ಮಾತನಾಡಿ ಈ ಸುದ್ದಿ ವಾಹಿನಿ ಅನ್ಯಾಯದ ವಿರುದ್ಧ ಭ್ರಷ್ಟರ ವಿರುದ್ಧ ಸುದ್ದಿ ಬಿತ್ತರಿಸುತ್ತಾ ಹಾಗೂ ನ್ಯಾಯಪರ ವಾಹಿನಿ ಆಗಲಿ ಎಂದರು
ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ವಾಣಿ ವಿಶೇಷಾಂಕ ಉದ್ಘಾಟಕರಾದ ವಾಲ್ಮೀಕಿ ನಾಯಕ ಸಮಾಜದ ಹಿರಿಯ ಮುಖಂಡರಾದ ಜೋಗದ ನಾರಾಯಣಪ್ಪ ನಾಯಕ
ಮಾತನಾಡಿ ಟೀ ಪಬ್ಲಿಕ್ ನ್ಯೂಸ್ ಹಾಗೂ ಕಲ್ಯಾಣ ಕರ್ನಾಟಕ ವಾಣಿ ಪತ್ರಿಕೆ ಇನ್ನು ಉನ್ನತ ಮಟ್ಟಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು
ನಂತರ ಟಿ ಪಬ್ಲಿಕ್ ನ್ಯೂಸ್ ವೆಬ್ಸೈಟ್ ಉದ್ಘಾಟಕರಾದ ಜೋಗದ ನಾರಾಯಣಪ್ಪ ನಾಯಕ ಮತ್ತು ಜೋಗದ ಹನುಮಂತಪ್ಪ ನಾಯಕ ಮಾತನಾಡಿ ಈಗಾಗಲೇ ಕಲ್ಯಾಣ ಕರ್ನಾಟಕ ವಾಣಿ ಪತ್ರಿಕೆ ಸಾಕಷ್ಟು ಹೆಸರು ಗಳಿಸಿದೆ ಇನ್ನು ನೂತನವಾಗಿ ಪ್ರಾರಂಭವಾಗಿರುವ ಟಿ ಪಬ್ಲಿಕ್ ನ್ಯೂಸ್ ಯಶಸ್ವಿ ಗೊಳ್ಳಲಿ ಎಂದರು
ಈ ಸಂದರ್ಭದಲ್ಲಿ ನಗರದ ಹಿರಿಯ ಮುಖಂಡರು ಭಾಗಿಯಾಗಿದ್ದರು
More Stories
“ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ: ತಪ್ಪಿತಸ್ಥರನ್ನು ತಕ್ಷಣ ಅಮಾನತು ಮಾಡಿ, ಇಲ್ಲದಿದ್ದರೆ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಘೇರಾವ್ – ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ”
ಶಾಲೆಯಲ್ಲೇ ಮುಖ್ಯೋಪಾಧ್ಯಾಯರ ಕಿತ್ತಾಟ! ಸಿಸಿಟಿವಿ ಪರಿಶೀಲಿಸಿ ತಪ್ಪಿತಸ್ಥರನ್ನು ಅಮಾನತು ಮಾಡಿ ಕಠಿಣ ಕಾನೂನು ಕ್ರಮ ಜರುಗಿಸಿ: ಮಹಾನಾಯಕ ಜನಜಾಗೃತಿ ವೇದಿಕೆ ಆಗ್ರಹ
ರಸ್ತೆ ಒತ್ತುವರಿ ಆರೋಪ ನಿರಾಧಾರ; ಕಾನೂನುಬದ್ಧವಾಗಿಯೇ ರೆಸಾರ್ಟ್ ನಿರ್ಮಿಸಲಾಗಿದೆ: ರಮೇಶ್ ನಾಯಕ