ಗಂಗಾವತಿ ನಗರದ ವಾಲ್ಮೀಕಿ ಸರ್ಕಲ್ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಅಖಿಲ ಕರ್ನಾಟಕ ಮಹರ್ಷಿ ಶ್ರೀ ವಾಲ್ಮೀಕಿ ನಾಯಕ ಸಮಾಜದ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು
ಸಭೆಯ ಅಧ್ಯಕ್ಷತೆಯನ್ನು ವಹಿಸಿದ ತಾಲೂಕು ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷರಾದ ವೀರಭದ್ರಪ್ಪ ನಾಯಕ ಮಾತನಾಡಿ 2026 ರ ಶ್ರೀ ಮಠದ 28 ನೇ ವಾರ್ಷಿಕೋತ್ಸವ ಹಾಗೂ ಲಿಂಗೈಕ್ಯ ಜಗದ್ಗುರು ಶ್ರೀ ಪುಣ್ಯಾನಂದಪುರಿ ಮಹಾಸ್ವಾಮಿಯವರ 19 ನೇ ವರ್ಷದ ಪುಣ್ಯರಾಧನೆ, ಮತ್ತು ಜಗದ್ಗುರು ಡಾಕ್ಟರ್ ಶ್ರೀ ಪ್ರಸನ್ನಾನಂದ ಮಹಾ ಸ್ವಾಮೀಜಿಯವರ 18ನೇ ವರ್ಷದ ಪಟ್ಟಾಧಿಕಾರ ಮಹೋತ್ಸವ, ಹಾಗೂ ಫೆಬ್ರುವರಿ 8 ಮತ್ತು 9 ನೇ ತಾರೀಕಿನಂದು ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ರಾಜನಹಳ್ಳಿ ಹರಿಹರ ದಾವಣಗೆರೆ ವಾಲ್ಮೀಕಿ ಸಮುದಾಯದ ಜನ ಜಾಗೃತಿ ಗಾಗಿ ನಡೆಯುವ 8 ನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಎಲ್ಲರೂ ಭಾಗಿಯಾಗಿ ಎಂದರು
ಗಂಗಾವತಿ ನಗರಸಭೆ ಮಾಜಿ ಅಧ್ಯಕ್ಷ ಬಸಪ್ಪ ನಾಯಕ ಇವರನ್ನು ಶ್ರೀ ಮಹರ್ಷಿ ವಾಲ್ಮೀಕಿ ರಾಜನಹಳ್ಳಿ ಗುರುಪೀಠದ ತಾಲೂಕ ಧರ್ಮದರ್ಶಿಗಳೆಂದು ಶ್ರೀಗಳು ಆಯ್ಕೆ ಮಾಡಿದರು ಈ ಸಂದರ್ಭದಲ್ಲಿ ಸಮಾಜದ ಗುರುಹಿರಿಯರು ಸನ್ಮಾನಿಸಿದರು ನಂತರ ಮಾತನಾಡಿ ನಮ್ಮ ಸಮಾಜದ ಏಳಿಗೆಗಾಗಿ ಶ್ರಮಿಸುತ್ತೇನೆ ಎಂದರು
ಈ ಸಂದರ್ಭದಲ್ಲಿ ಗಂಗಾವತಿ ನಗರದ ವಾಲ್ಮೀಕಿ ಸಮಾಜದ ಗುರುಹಿರಿಯರು ಭಾಗಿಯಾಗಿದ್ದರು
2026 ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆ ಅಂಗವಾಗಿ ಪೂರ್ವಭಾವಿ ಸಭೆ
More Stories
ಶ್ರೀ ವಿದ್ಯಾನಿಕೇತನ ಪಿಯುಸಿ ಫಲಿತಾಂಶದಲ್ಲಿ ಭರ್ಜರಿ ಸಾಧನೆ – ಉತ್ತರ ಕರ್ನಾಟಕಕ್ಕೆ ಹೊಸ ಗರಿಮೆ
ಬೇತೆಲ್ ಪದವಿ ಪೂರ್ವ ಕಾಲೇಜ್ನ ಅತ್ಯುತ್ತಮ ಫಲಿತಾಂಶ – ವಿದ್ಯಾರ್ಥಿಗಳ ಅದ್ಭುತ ಸಾಧನೆ
RVSR ರಾಜ್ಯಕ್ಕೆ 6ನೇ ರ್ಯಾಂಕ್ ದ್ವಿತೀಯ ಪಿಯುಸಿ ಫಲಿತಾಂಶ 100% – ಐತಿಹಾಸಿಕ ಸಾಧನೆ.