ಟಿ ಪಬ್ಲಿಕ್ ನ್ಯೂಸ್
ಗಂಗಾವತಿ: ನಗರದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ Babu Jagjivan Ram ಅವರ 119ನೇ ಜನ್ಮದಿನವನ್ನು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಬಾಬು ಜಗಜೀವನ್ ರಾಮ್ ವೃತ್ತದಲ್ಲಿ ಪುಷ್ಪ ಅಲಂಕಾರ ಪೂಜೆ ಸಲ್ಲಿಸಲಾಯಿತು. ಬಳಿಕ B. R. Ambedkar ಅವರ ಪ್ರತಿಮೆಗೆ ಹೂವಿನ ಹಾರ ಹಾಕಿ ಗೌರವ ಸಲ್ಲಿಸಲಾಯಿತು. ನಂತರ ನಗರದ ಪ್ರಮುಖ ರಸ್ತೆಗಳಲ್ಲಿ ಭವ್ಯ ಮೆರವಣಿಗೆ ನಡೆಯಿತು.
ಮೆರವಣಿಗೆಯ ಬಳಿಕ ಪಿ.ಎಂ. ಶ್ರೀ ಬಾಲಕಿಯರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ಜರುಗಿತು. ಅತಿಥಿಗಳನ್ನು ಹಸಿರು ಶಾಲ್ ಮತ್ತು ಪುಷ್ಪ ನೀಡಿ ಸನ್ಮಾನಿಸಲಾಯಿತು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಡಾ. ಹುಲಿಗೆಪ್ಪ ಎಚ್ ಮಾತನಾಡಿ, “ಡಾ. ಬಾಬು ಜಗಜೀವನ್ ರಾಮ್ ಅವರ ಕೊಡುಗೆ ಅಪಾರವಾಗಿದೆ” ಎಂದು ಹೇಳಿದರು.
ಗಣ್ಯರಿಂದ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ವಿಶೇಷ ಉಪನ್ಯಾಸಕರಾದ ಡಾ. ಚಂದ್ರಶೇಖರ್ ಎಸ್.ಬಿ. ಮಾತನಾಡಿ, “ಡಾ. ಜಗಜೀವನ್ ರಾಮ್ ಹಾಗೂ ಡಾ. ಅಂಬೇಡ್ಕರ್ ಅವರು ಒಂದೇ ಜಾತಿಗೆ ಸೀಮಿತ ವ್ಯಕ್ತಿಗಳಲ್ಲ, ಅವರು ಸಮಸ್ತ ಸಮಾಜದ ನಾಯಕರು” ಎಂದು ಅಭಿಪ್ರಾಯಪಟ್ಟರು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮರೆಡ್ಡಿ ಪಾಟೀಲ್ ಅವರು ಹಸಿರು ಕ್ರಾಂತಿಯ ಹರಿಕಾರ ಹಾಗೂ ಉಪ ಪ್ರಧಾನಮಂತ್ರಿಗಳಾದ ಡಾಕ್ಟರ್, ಬಾಬು ಜಗಜೀವನರಾಮ್ ಅವರ 119ನೇ ಜನ್ಮದಿನದ ಶುಭಾಶಯಗಳು ತಿಳಿಸಿದರು
ನಗರಸಭೆ ಪೌರಾಯುಕ್ತರಾದ ಆರ್. ವಿರುಪಾಕ್ಷಿಮೂರ್ತಿ ಮಾತನಾಡಿ, “1908ರ ಏಪ್ರಿಲ್ 5ರಂದು ಬಿಹಾರದಲ್ಲಿ ಜನಿಸಿದ ಜಗಜೀವನ್ ರಾಮ್ ಅವರು ಬಾಲ್ಯದಲ್ಲೇ ಸಾಮಾಜಿಕ ಅಸಮಾನತೆಯನ್ನು ಎದುರಿಸಿ, ಮಹಾನ್ ನಾಯಕನಾಗಿ ಹೊರಹೊಮ್ಮಿದರು” ಎಂದು ಹೇಳಿದರು.
ನಗರ ಪೊಲೀಸ್ ಠಾಣೆಯ ಪಿ.ಐ. ಪ್ರಕಾಶ್ ಮಾಳೆ ಅವರು, “ಜಗಜೀವನ್ ರಾಮ್ ಅವರು ದಲಿತರ ಹಕ್ಕುಗಳಿಗಾಗಿ ಶ್ರಮಿಸಿ, ಸಮಾನತೆ ಮತ್ತು ನ್ಯಾಯಕ್ಕಾಗಿ ಹೋರಾಡಿದರು” ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಮುಖಂಡರು ಹಾಗೂ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಭಾಗವಹಿಸಿ ಕಾರ್ಯಕ್ರಮವನ್ನು ಮತ್ತಷ್ಟು ಸಂಭ್ರಮಯುಕ್ತಗೊಳಿಸಿದರು.
ನೈಜ್ಯ ಸುದ್ದಿಗಾಗಿ ಟಿ ಪಬ್ಲಿಕ್ ನ್ಯೂಸ್
More Stories
ಶ್ರೀ ವಿದ್ಯಾನಿಕೇತನ ಪಿಯುಸಿ ಫಲಿತಾಂಶದಲ್ಲಿ ಭರ್ಜರಿ ಸಾಧನೆ – ಉತ್ತರ ಕರ್ನಾಟಕಕ್ಕೆ ಹೊಸ ಗರಿಮೆ
ಬೇತೆಲ್ ಪದವಿ ಪೂರ್ವ ಕಾಲೇಜ್ನ ಅತ್ಯುತ್ತಮ ಫಲಿತಾಂಶ – ವಿದ್ಯಾರ್ಥಿಗಳ ಅದ್ಭುತ ಸಾಧನೆ
RVSR ರಾಜ್ಯಕ್ಕೆ 6ನೇ ರ್ಯಾಂಕ್ ದ್ವಿತೀಯ ಪಿಯುಸಿ ಫಲಿತಾಂಶ 100% – ಐತಿಹಾಸಿಕ ಸಾಧನೆ.