ಟಿ ಪಬ್ಲಿಕ್ ನ್ಯೂಸ್
ಗಂಗಾವತಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇಡೀ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿ ಶೈಕ್ಷಣಿಕ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮೆರೆದ ಶ್ರೀ ವಿದ್ಯಾನಿಕೇತನ ಸಂಸ್ಥೆಯ ಸಾಧನೆಗೆ ಪಟ್ಟಣದಲ್ಲೇ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ.
ಸಂಸ್ಥೆಯ ಸಂಸ್ಥಾಪಕರಾದ, ಮನೆ ಮನೆಗೆ ಶಿಕ್ಷಣದ ಬೆಳಕು ಹರಡಿದ ಅಕ್ಷರ ಯೋಗಿ, ಶೈಕ್ಷಣಿಕ ಲೋಕದಲ್ಲಿ ಪ್ರಜ್ವಲಿಸುತ್ತಿರುವ ಸೂರ್ಯ ಎಂದು ಖ್ಯಾತಿ ಪಡೆದ ನೆಕ್ಕಂಟಿ ಸೂರಿಬಾಬು ಅವರಿಗೆ ಗಂಗಾವತಿ ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಜೋಗದ ಕೃಷ್ಣಪ್ಪ ನಾಯಕ ಹಾಗೂ ಗಾದಿಲಿಂಗಪ್ಪ ನಾಯಕ ಅವರು ಶಾಲ್ ಹೊದಿಸಿ, ಹೂವಿನ ಹಾರ ಹಾಕಿ, ಕೇಕ್ ಕತ್ತರಿಸುವ ಮೂಲಕ ಸನ್ಮಾನಿಸಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸೂರಿಬಾಬು ಅವರ ಶ್ರಮ, ಸಮರ್ಪಣೆ ಹಾಗೂ ಶಿಕ್ಷಣದ ಮೇಲಿನ ಅಭಿರುಚಿಯೇ ಈ ಮಹತ್ವದ ಸಾಧನೆಗೆ ಕಾರಣವಾಗಿದೆ ಎಂದು ಪ್ರಶಂಸಿಸಿದರು.
ಈ ಸನ್ಮಾನ ಕಾರ್ಯಕ್ರಮದಲ್ಲಿ ವಿದ್ಯಾನಿಕೇತನ ಸಂಸ್ಥೆಯ ಈ ಸಾಧನೆ ಗಂಗಾವತಿ ತಾಲೂಕಿಗೆ ಮಾತ್ರವಲ್ಲ, ಇಡೀ ರಾಜ್ಯಕ್ಕೂ ಹೆಮ್ಮೆ ತರುವಂತಹದ್ದು ಎಂದು ಅಭಿಪ್ರಾಯ ವ್ಯಕ್ತವಾಯಿತು.
ನೈಜ ಸುದ್ದಿಗಾಗಿ ಟಿ ಪಬ್ಲಿಕ್ ನ್ಯೂಸ್
More Stories
ಮಳೆ-ಬೆಳೆಯಿಗಾಗಿ ಮಲ್ಲಾಪುರ ಗಾಳೆಮ್ಮ ದೇವಿಯ ವಿಶೇಷ ಆರಾಧನೆ
“ದಲಿತ ನಾಯಕರಿಗೆ ನ್ಯಾಯ ಕೊಡದಿದ್ದರೆ ಕಾಂಗ್ರೆಸ್ಗೆ ಜನತೆ ತಕ್ಕ ಪಾಠ ಕಲಿಸುತ್ತದೆ: ಕೆ.ಎಚ್.ಮುನಿಯಪ್ಪ ಡಿಸಿಎಂ ಆಗಲಿ ಎಂದು ನಾಗರಾಜ ದೊಡ್ಮನಿ ಆಗ್ರಹ”
“22 ವರ್ಷಗಳ ಅಕ್ರಮ ಮದ್ಯ ಮಾರಾಟಕ್ಕೆ ಅಧಿಕಾರಿಗಳೂ ಶಾಮೀಲು? — ಅಜಯ್ ಬಾರ್ ಮಾಲೀಕನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ”