🟥 ಟಿ ಪಬ್ಲಿಕ್ ನ್ಯೂಸ್ ಬಳ್ಳಾರಿ
ದಿನಾಂಕ : 12/05/2026
ಬಳ್ಳಾರಿ ಜಿಲ್ಲೆ: ಸಂಡೂರು ತಾಲೂಕಿನಲ್ಲಿ ಧೀರ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ತಾಲೂಕು ಅಧ್ಯಕ್ಷರು ಹಾಗೂ ವಿವಿಧ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಇಂದು ನಡೆಯಿತು.
ಈ ಸಂದರ್ಭದಲ್ಲಿ ಸಂಡೂರು ತಾಲೂಕು ಅಧ್ಯಕ್ಷರಾಗಿ ಪರಶುರಾಮ್ ಅವರನ್ನು ಆಯ್ಕೆ ಮಾಡಲಾಗಿದ್ದು, ತಾಲೂಕು ಮಟ್ಟದ ವಿವಿಧ ಪದಾಧಿಕಾರಿಗಳನ್ನೂ ನೇಮಕ ಮಾಡಲಾಯಿತು.
ಕಾರ್ಯಕ್ರಮದಲ್ಲಿ ವೇದಿಕೆಯ ರಾಜ್ಯಾಧ್ಯಕ್ಷರಾದ ವಿರುಪಾಕ್ಷಿ ಗೌಡ ನಾಯಕ ಅವರು ಮಾತನಾಡಿ, ಕನ್ನಡ ನಾಡು, ನುಡಿ ಹಾಗೂ ಸಾಮಾಜಿಕ ಹಿತಾಸಕ್ತಿಗಾಗಿ ಸಂಘಟನೆ ಇನ್ನಷ್ಟು ಬಲಪಡಿಸುವ ಅಗತ್ಯವಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಉತ್ತರ ಕರ್ನಾಟಕ ಅಧ್ಯಕ್ಷರು ಹಾಗೂ ವಿಜಯನಗರ ಜಿಲ್ಲಾಧ್ಯಕ್ಷರಾದ ರಾಜು ಗುಜ್ಜಲ್, ಉತ್ತರ ಕರ್ನಾಟಕ ಯುವಘಟಕ ಅಧ್ಯಕ್ಷರಾದ ಬಿ.ಎಂ.ಎಸ್. ಮಂಜುನಾಥ್, ಸಂಡೂರು ಯುವನಾಯಕ ಹಾಗೂ ದಲಿತ ಸೇನಾ ಸಮಿತಿಯ ತಾಲೂಕು ಅಧ್ಯಕ್ಷರಾದ ರಾಜೇಶ್ ಹೆಗಡೆ, ವಿಜಯನಗರ ಜಿಲ್ಲಾ ಕಾರ್ಯದರ್ಶಿಗಳಾದ ರೋಹಿಣಿ ವೆಂಕಟೇಶ್, ಜಿಲ್ಲಾ ಉಪಾಧ್ಯಕ್ಷರಾದ ಕಿರಣ್ ಕಟಿಗಿ, ನಗರ ಘಟಕದ ಅಧ್ಯಕ್ಷರಾದ ನಾಗರಾಜ್ ನಾಯ್ಕ್, ಭುವನಹಳ್ಳಿ ಗ್ರಾಮ ಅಧ್ಯಕ್ಷರಾದ ಶಣ್ಮುಖ ನಾಯಕ ಸೇರಿದಂತೆ ಅನೇಕ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಕಾರ್ಯಕ್ರಮವು ಸಂಘಟನೆಯ ಬಲವರ್ಧನೆ ಹಾಗೂ ಕನ್ನಡಪರ ಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬುವಂತಾಯಿತು.
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್
ಸಂಡೂರಿನಲ್ಲಿ ಧೀರ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಪದಾಧಿಕಾರಿಗಳ ಆಯ್ಕೆ
More Stories
ಮಳೆ-ಬೆಳೆಯಿಗಾಗಿ ಮಲ್ಲಾಪುರ ಗಾಳೆಮ್ಮ ದೇವಿಯ ವಿಶೇಷ ಆರಾಧನೆ
“ದಲಿತ ನಾಯಕರಿಗೆ ನ್ಯಾಯ ಕೊಡದಿದ್ದರೆ ಕಾಂಗ್ರೆಸ್ಗೆ ಜನತೆ ತಕ್ಕ ಪಾಠ ಕಲಿಸುತ್ತದೆ: ಕೆ.ಎಚ್.ಮುನಿಯಪ್ಪ ಡಿಸಿಎಂ ಆಗಲಿ ಎಂದು ನಾಗರಾಜ ದೊಡ್ಮನಿ ಆಗ್ರಹ”
“22 ವರ್ಷಗಳ ಅಕ್ರಮ ಮದ್ಯ ಮಾರಾಟಕ್ಕೆ ಅಧಿಕಾರಿಗಳೂ ಶಾಮೀಲು? — ಅಜಯ್ ಬಾರ್ ಮಾಲೀಕನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ”