🟥 ಟಿ ಪಬ್ಲಿಕ್ ನ್ಯೂಸ್ ಗಂಗಾವತಿ
ದಿನಾಂಕ : 15/05/2026
ಗಂಗಾವತಿ: ನಗರ ಪೊಲೀಸ್ ಠಾಣೆಗೆ ನೂತನ ಸಿ.ಪಿ.ಐ ಆಗಿ ಅಧಿಕಾರ ವಹಿಸಿಕೊಂಡಿರುವ ಶ್ರೀ ಪ್ರಕಾಶ್ ಆರ್. ಯಾತನೂರು ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡರ ಬಣ) ಗಂಗಾವತಿ ತಾಲೂಕು ಘಟಕದ ವತಿಯಿಂದ ಆತ್ಮೀಯ ಸ್ವಾಗತ ಕೋರಲಾಯಿತು.
ಸಂಘಟನೆಯ ಪದಾಧಿಕಾರಿಗಳು ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಗಿಣಿಮೋತಿ ಮಾತನಾಡಿ, “ಗಂಗಾವತಿ ಭಾಗದಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳು ಹಾಗೂ ವಿವಿಧ ದಂಧೆಗಳಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಜನಸ್ನೇಹಿ ಆಡಳಿತದ ಮೂಲಕ ಸಾರ್ವಜನಿಕರ ವಿಶ್ವಾಸ ಗಳಿಸಬೇಕು” ಎಂದು ಮನವಿ ಮಾಡಿದರು.
ನೂತನ ಸಿ.ಪಿ.ಐ ಪ್ರಕಾಶ್ ಆರ್. ಯಾತನೂರು ಅವರು ಸಾರ್ವಜನಿಕ ಸೇವೆಯಲ್ಲಿ ಯಶಸ್ಸು ಸಾಧಿಸಲಿ ಎಂದು ಸಂಘಟನೆಯ ಮುಖಂಡರು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ನಗರ ಘಟಕದ ಕಾರ್ಯದರ್ಶಿಗಳಾದ ಅಂಜಿನಿ ಗೊರೂರು, ಮಂಜುನಾಥ ಕಾಯಿಗಡ್ಡಿ, ಸಂಘಟನಾ ಕಾರ್ಯದರ್ಶಿಗಳಾದ ಪ್ರವೀಣ್ ಕುಮಾರ, ರಮೇಶ್ ಗಿಣಿಮೋತಿ, ಕಾರ್ಯಕಾರಿಣಿ ಸದಸ್ಯರಾದ ಮಂಜು ಕಾಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್
ನಗರ ಠಾಣೆಗೆ ನೂತನ ಸಿ.ಪಿ.ಐ ಪ್ರಕಾಶ್ ಯಾತನೂರುಗೆ ಕರವೇ ನಾರಾಯಣಗೌಡ ಬಣದಿಂದ ಭರ್ಜರಿ ಸ್ವಾಗತ
More Stories
“ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ: ತಪ್ಪಿತಸ್ಥರನ್ನು ತಕ್ಷಣ ಅಮಾನತು ಮಾಡಿ, ಇಲ್ಲದಿದ್ದರೆ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಘೇರಾವ್ – ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ”
ಶಾಲೆಯಲ್ಲೇ ಮುಖ್ಯೋಪಾಧ್ಯಾಯರ ಕಿತ್ತಾಟ! ಸಿಸಿಟಿವಿ ಪರಿಶೀಲಿಸಿ ತಪ್ಪಿತಸ್ಥರನ್ನು ಅಮಾನತು ಮಾಡಿ ಕಠಿಣ ಕಾನೂನು ಕ್ರಮ ಜರುಗಿಸಿ: ಮಹಾನಾಯಕ ಜನಜಾಗೃತಿ ವೇದಿಕೆ ಆಗ್ರಹ
ರಸ್ತೆ ಒತ್ತುವರಿ ಆರೋಪ ನಿರಾಧಾರ; ಕಾನೂನುಬದ್ಧವಾಗಿಯೇ ರೆಸಾರ್ಟ್ ನಿರ್ಮಿಸಲಾಗಿದೆ: ರಮೇಶ್ ನಾಯಕ