May 30, 2026

ಕಾರಟಗಿ ಪುರಸಭೆಗೆ ಪ್ರಾಮಾಣಿಕ ಅಧಿಕಾರಿ ಸಾಬಣ್ಣ ಕಟ್ಟೆಕಾರ್ : ಸಚಿವ Shivraj Tangadagi ಅವರಿಗೆ ಕರವೇ ವತಿಯಿಂದ ಅದ್ದೂರಿ ಸನ್ಮಾನ

🟥 ಟಿ ಪಬ್ಲಿಕ್ ನ್ಯೂಸ್ ಕಾರಟಗಿ
ದಿನಾಂಕ : 17/05/2026

ಕಾರಟಗಿ: ಕಾರಟಗಿ ಪುರಸಭೆಯ ಮುಖ್ಯ ಅಧಿಕಾರಿಯಾಗಿ ನಿಷ್ಠಾವಂತ, ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿಯಾದ ಸಾಬಣ್ಣ ಕಟ್ಟೆಕಾರ್ ಅವರನ್ನು ನೇಮಕ ಮಾಡಿಸಿರುವ ಹಿನ್ನೆಲೆಯಲ್ಲಿ, ಸನ್ಮಾನ್ಯ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ Shivraj Tangadagi ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆಯ ಮಾರುತಿ ಸಂಗಡಿಗರು ಭವ್ಯವಾಗಿ ಸನ್ಮಾನಿಸಿ ಗೌರವ ಸಲ್ಲಿಸಿದರು.

ಪುರಸಭೆಯ ಮುಖ್ಯ ಅಧಿಕಾರಿ ಸಾಬಣ್ಣ ಕಟ್ಟೆಕಾರ್

ನಗರದಲ್ಲಿ ನಡೆದ ಈ ವಿಶೇಷ ಕಾರ್ಯಕ್ರಮದಲ್ಲಿ ಸಚಿವರಿಗೆ ಶಾಲು ಹೊದಿಸಿ, ಹಾರ ಹಾಕಿ ಹಾಗೂ ನೆನಪಿನ ಕಾಣಿಕೆ ನೀಡಿ ಆತ್ಮೀಯವಾಗಿ ಅಭಿನಂದಿಸಲಾಯಿತು. ಕಾರ್ಯಕ್ರಮದ ವೇಳೆ ಕರವೇ ಮುಖಂಡರು ಮಾತನಾಡಿ, “ಸಾಬಣ್ಣ ಕಟ್ಟೆಕಾರ್ ಅವರಂತಹ ಕರ್ತವ್ಯನಿಷ್ಠ, ಜನಪರ ಹಾಗೂ ಪ್ರಾಮಾಣಿಕ ಅಧಿಕಾರಿಗಳು ಆಡಳಿತ ವ್ಯವಸ್ಥೆಗೆ ಮಾದರಿಯಾಗಿದ್ದಾರೆ. ಇಂತಹ ದಕ್ಷ ಅಧಿಕಾರಿಯನ್ನು ಕಾರಟಗಿ ಪುರಸಭೆಗೆ ನೇಮಕ ಮಾಡಿಸಿರುವ ಸಚಿವ ಶಿವರಾಜ್ ತಂಗಡಗಿ ಅವರ ಕ್ರಮ ಸಾರ್ವಜನಿಕರಲ್ಲಿ ಹೊಸ ವಿಶ್ವಾಸ ಮೂಡಿಸಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಭ್ರಮ, ಗೌರವ ಹಾಗೂ ಜನಪರ ಆಡಳಿತದ ಹೆಮ್ಮೆಯ ವಾತಾವರಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರಕ್ಷಣಾ ವೇದಿಕೆಯ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯ ಮುಖಂಡರು, ಸಾರ್ವಜನಿಕರು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದು ಸಚಿವರಿಗೆ ಅಭಿನಂದನೆ ಸಲ್ಲಿಸಿದರು.

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

About The Author

error: Content is protected !!