June 22, 2026

ಪರಿಸರ ರಕ್ಷಣೆ ಪ್ರತಿಯೊಬ್ಬರ ಹೊಣೆ: ಸಸಿ ನೆಟ್ಟು ಜಾಗೃತಿ ಮೂಡಿಸಿದ ಪರಶುರಾಮ ಮಡ್ಡೇರ

🟥 ಟಿ ಪಬ್ಲಿಕ್ ನ್ಯೂಸ್ ಗಂಗಾವತಿ
ದಿನಾಂಕ: 05/06/2026

“ಪರಿಸರ ಉಳಿದರೆ ಭವಿಷ್ಯ ಉಳಿಯುತ್ತದೆ; ಸಸಿ ನೆಟ್ಟು ಪೋಷಿಸುವುದು ಪ್ರತಿಯೊಬ್ಬರ ಕರ್ತವ್ಯ” – ಪರಶುರಾಮ ಮಡ್ಡೇರ.

ಗಂಗಾವತಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರದ 11ನೇ ವಾರ್ಡ್‌ನ ಪ್ರಶಾಂತ ನಗರದ ಉದ್ಯಾನವನದಲ್ಲಿ ಮಾಜಿ ನಗರಸಭೆ ಸದಸ್ಯ ಪರಶುರಾಮ ಮಡ್ಡೇರ ಹಾಗೂ ಅರಣ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಪರಶುರಾಮ ಮಡ್ಡೇರ, ಪರಿಸರ ಸಂರಕ್ಷಣೆ ಇಂದಿನ ಅಗತ್ಯವಾಗಿದ್ದು, ಪ್ರತಿಯೊಬ್ಬ ನಾಗರಿಕರೂ ಪರಿಸರ ರಕ್ಷಣೆಯ ಹೊಣೆಗಾರಿಕೆಯನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.

“ನಾವು ಪರಿಸರವನ್ನು ಕಾಪಾಡಿದರೆ ಮಾತ್ರ ಪರಿಸರ ನಮ್ಮನ್ನು ರಕ್ಷಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಮಾನವನ ಅತಿಯಾದ ಅಭಿವೃದ್ಧಿ ಹಾಗೂ ಸ್ವಾರ್ಥಪರ ಚಟುವಟಿಕೆಗಳಿಂದ ಪರಿಸರಕ್ಕೆ ಸಾಕಷ್ಟು ಹಾನಿಯಾಗುತ್ತಿದೆ. ಭೂಮಿಯ ಮೇಲಿನ ಸಕಲ ಜೀವಿಗಳ ಬದುಕಿಗೆ ಆಧಾರವಾಗಿರುವ ಮಣ್ಣು, ನೀರು ಹಾಗೂ ಗಾಳಿಯನ್ನು ಮನುಷ್ಯ ತನ್ನ ಆಸೆಗಾಗಿ ಹಾಳು ಮಾಡುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ” ಎಂದು ಅವರು ಅಭಿಪ್ರಾಯಪಟ್ಟರು.

ಪರಿಸರ ಸಮತೋಲನ ಕಾಪಾಡಲು ಹೆಚ್ಚಿನ ಸಂಖ್ಯೆಯಲ್ಲಿ ಸಸಿ ನೆಟ್ಟು ಅವುಗಳನ್ನು ಪೋಷಿಸುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದ ಅವರು, ಪರಿಸರ ಸಂರಕ್ಷಣೆ ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಬಳಿಕ ಪ್ರಶಾಂತ ನಗರದ ಪ್ರಮುಖ ರಸ್ತೆ ಬದಿಗಳಲ್ಲಿ ಹಾಗೂ ಸರ್ಕಾರಿ ಶಾಲೆಯ ಆವರಣದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಸಸಿಗಳ ಸಂರಕ್ಷಣೆಗೆ ಸಂಕಲ್ಪ ಕೈಗೊಂಡರು.

ಈ ಸಂದರ್ಭದಲ್ಲಿ ಮಾಜಿ ನಗರಸಭೆ ಸದಸ್ಯರಾದ ಮುಸ್ತಾಕ್ ಅಲಿ, ರಾಜ ಮಹಮ್ಮದ್, ಲಿಂಗರಾಜ, ವೇಣು ಎಲಿಗಾರ, ಬಸವರಾಜ ಬಾಳೇಕಾಯಿ, ರವಿ, ರಫೀಕ್, ಅಬ್ದುಲ್ ರೆಹಮಾನ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

About The Author

error: Content is protected !!