June 22, 2026

ಹೆಲ್ಮೆಟ್ ಇಲ್ಲದೆ ರಸ್ತೆಗಿಳಿದರೆ ಜೀವಕ್ಕೆ ಆಹ್ವಾನ; ನಿಯಮ ಉಲ್ಲಂಘನೆಗೆ ಪೊಲೀಸರ ಕಟ್ಟುನಿಟ್ಟಿನ ಎಚ್ಚರಿಕೆ

🟥 ಟಿ ಪಬ್ಲಿಕ್ ನ್ಯೂಸ್ | ಗಂಗಾವತಿ
ದಿನಾಂಕ: 12/06/2026

ಗಂಗಾವತಿ: ರಸ್ತೆ ಅಪಘಾತಗಳಿಂದ ಸಂಭವಿಸುವ ಜೀವಹಾನಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಗಂಗಾವತಿ ಉಪವಿಭಾಗದ ಡಿವೈಎಸ್ಪಿ ಜೆ.ಎಸ್. ನ್ಯಾಮಗೌಡರ್ ಸಾರ್ವಜನಿಕರಿಗೆ ಕಠಿಣ ಎಚ್ಚರಿಕೆ ನೀಡಿದರು.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ದ್ವಿಚಕ್ರ ವಾಹನ ಚಾಲಕರು ಮಾತ್ರವಲ್ಲದೆ ಹಿಂಬದಿ ಸವಾರರೂ ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದ್ದು, ಇದು ಕೇವಲ ಕಾನೂನು ಪಾಲನೆಯ ವಿಷಯವಲ್ಲ, ಜೀವ ರಕ್ಷಣೆಯ ಮಹತ್ವದ ಕ್ರಮವಾಗಿದೆ ಎಂದು ಹೇಳಿದರು.

ಅತಿವೇಗ, ಮೊಬೈಲ್ ಬಳಕೆ ಹಾಗೂ ನಿರ್ಲಕ್ಷ್ಯದಿಂದ ವಾಹನ ಚಲಾಯಿಸುವುದು ಅಪಘಾತಗಳಿಗೆ ಪ್ರಮುಖ ಕಾರಣಗಳಾಗಿದ್ದು, ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

“ಹೆಲ್ಮೆಟ್ ಧರಿಸುವುದರಿಂದ ಗಂಭೀರ ತಲೆಗಾಯಗಳು ಹಾಗೂ ಜೀವಹಾನಿಯನ್ನು ಬಹುತೇಕ ತಪ್ಪಿಸಬಹುದು. ಪ್ರತಿಯೊಬ್ಬ ವಾಹನ ಸವಾರರು ತಮ್ಮ ಹಾಗೂ ಕುಟುಂಬದ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜವಾಬ್ದಾರಿಯಿಂದ ವರ್ತಿಸಬೇಕು. ರಸ್ತೆ ಸುರಕ್ಷತೆ ಎಲ್ಲರ ಹೊಣೆಗಾರಿಕೆಯಾಗಿದೆ” ಎಂದು ಡಿವೈಎಸ್ಪಿ ಜೆ.ಎಸ್. ನ್ಯಾಮಗೌಡರ್ ತಿಳಿಸಿದರು.

ಸುರಕ್ಷಿತ ಸಂಚಾರಕ್ಕಾಗಿ ಸಾರ್ವಜನಿಕರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಅಪಘಾತ ಮುಕ್ತ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕೆಂದು ಅವರು ಮನವಿ ಮಾಡಿದರು.

ನೈಜ ಸುದ್ದಿಗಾಗಿ – ಟಿ ಪಬ್ಲಿಕ್ ನ್ಯೂಸ್

Search You Tube: T Public News

About The Author

error: Content is protected !!